Focus News
Trending

ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ: ಗಮನಸೆಳೆದ ತೆಪ್ಪೋತ್ಸವ

ಗೋಕರ್ಣ: ಇಲ್ಲಿನ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದ ತ್ರಿಪುರಾಖ್ಯ ದೀಪೋತ್ಸವ ವಿಜೃಂಭಣೆಯಿoದ ನೆರವೇರಿತು. ದೇವಾಲಯದಲ್ಲಿ ಲಕ್ಷಬಿಲ್ವಾರ್ಚನೆ ನೈಮಿತ್ತ ವಿವಿಧ ಕಾರ್ಯಕ್ರಮಗಳು ನಡೆದವು. ಭೀಮಕೊಂಡಕ್ಕೆ ದೇವರ ಉತ್ಸವ ತೆರಳಿ ಧಾತ್ರಿ ಹೋಮ, ಭೀಮೇಶ್ವರ ಮತ್ತು ಜನಾರ್ಧನ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿತು. ಈ ವೇಳೆ ಹಾಲಕ್ಕಿ ಸಮಾಜದವರು ದೇವರಿಗೆ ಫಲ ಸಮರ್ಪಿಸಿದರು. ಬಳಿಕ ಇಲ್ಲಿಯೇ ಅಡುಗೆ ಸಿದ್ಧಪಡಿಸಿ ವನಭೋಜನ ನಡೆಯಿತು,

ಎಲ್ಲಾ ಸಮುದಾಯದವರು ಒಟ್ಟಿಗೆ ಕುಳಿತು ಭೋಜನ ಸ್ವೀಕರಿಸುವುದು ವಿಶೇಷ. ಸಂಜೆ ಉತ್ಸವವು ದೇವಾಲಯಕ್ಕೆ ಮರಳಿ ರಾತ್ರಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ಉತ್ಸವ, ತೆಪ್ಪೋತ್ಸವ ಹಾಗೂ ರಥಬೀದಿಯಲ್ಲಿ ರಥೋತ್ಸವ ಜರುಗಿತು. ಊರಿನ ಜನರು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button