ಕಲ್ಲುಬಂಡೆ ಸ್ಫೋಟಿಸಿದ ಪರಿಣಾಮ ಮನೆ ಮೇಲೆ‌ ಸಿಡಿದ ಕಲ್ಲುಗಳು: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು

ಕುಮಟಾ: ಹೆದ್ದಾರಿ ಕಾಮಗಾರಿಗಾಗಿ ಕಲ್ಲುಬಂಡೆ ಸ್ಪೋಟಿಸಿದ ಪರಿಣಾಮ, ಸ್ಪೋಟಗೊಂಡ ಕಲ್ಲುಗಳು ಮನೆಗಳ ಮೇಲೆ ಬಿದ್ದ ಘಟನೆ ತಾಲೂಕಿನ ತಂಡ್ರಕುಳಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡಿದೆ ಏಕಾಏಕಿ ಬಂಡೆಗಳನ್ನು ಸ್ಫೋಟಿಸಲಾಗಿದ್ದು, ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಸ್ಫೋಟದಿಂದ ಸಿಡಿದ ಕಲ್ಲುಗಳು ಮನೆ ಮೇಲೆ ಬಿದ್ದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದರಿಂದ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ 66 ನ್ನು ತಡೆದು ಪ್ರತಿಭಟನೆ ನಡೆಸಿದರು. ಕೂಡಲೇ ಸ್ಥಳಕ್ಕೆ ಕುಮಟಾ ಶಾಸಕ ದಿನಕರ್ ಶಟ್ಟಿ ಅವರು ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆದು ಗುತ್ತಿಗೆದಾರನನ್ನು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

ವಿಸ್ಮಯ ನ್ಯೂಸ್ ಕುಮಟಾ

Exit mobile version