ಅನಾರೋಗ್ಯ ಎಂದು ಆಸ್ಪತ್ರೆಗೆ ಆಗಮಿಸಿದ ವಿವಾಹಿತ ಮಹಿಳೆ ನಾಪತ್ತೆ: ಗೋದಿಬಣ್ಣ, ಸಾಧಾರಣ ಮೈಕಟ್ಟು: ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ

ಶಿರಸಿ: ಅನಾರೋಗ್ಯ ಎಂದು ಆಸ್ಪತ್ರೆಗೆ ಆಗಮಿಸಿದ ವೇಳೆ ವಿವಾಹಿತ ಮಹಿಳೆಯೊಬ್ಬಳು ಇದ್ದಕ್ಕಿದ್ದಂತೆ ನಾಪತ್ತೆಯಾದ ಘಟನೆ ಶಿರಸಿಯಲ್ಲಿ ನಡೆದಿದೆ, ಕಾವ್ಯಶ್ರೀ ವಿನಾಯಕ ಜೋಗಳೇಕರ್ ( 20 ವರ್ಷ) ನಾಪತ್ತೆಯಾದ ಯುವತಿ. ಈ ಕುರಿತು ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾವ್ಯಶ್ರೀ ತನ್ನ ಮಾವನ ಜೊತೆ ಅನಾರೋಗ್ಯದ ನಿಮಿತ್ತ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ್ದಳು. ಈ ವೇಳೆ ಮಾವನ ಹತ್ತಿರ ತರಕಾರಿ ತರುವಂತೆ ತಿಳಿಸಿ, ಮಾವ ತರಕಾರಿ ತರುವಷ್ಟರಲ್ಲಿ ಕಾವ್ಯಶ್ರೀ ನಾಪತ್ತೆಯಾಗಿದ್ದಾಳೆ. ಮನೆಗೂ ಬಾರದೆ, ನೆಂಟರ ಮನೆಗೂ ಹೋಗದೆ ಇರುವ ಕುರಿತು ಪ್ರಕರಣ ದಾಖಲಾಗಿದೆ. ಮಹಿಳೆ ಸುಮಾರು 5.2 ಇಂಚು ಎತ್ತರ ಮತ್ತು ಗೋಧಿ ಬಣ್ಣ , ಸಾಧಾರಣ ಮೈಕಟ್ಟು ಹೊಂದಿದ್ದಾಳೆ. ಕನ್ನಡ , ಇಂಗ್ಲೀಷ್ ಮಾತನಾಡುತ್ತಾರೆ, ಈಕೆಯ ಕುರಿತು ಮಾಹಿತಿ ಸಿಕ್ಕಿಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version