Important
Trending

500 ಕ್ವಿಂಟಾಲ್ ರೇಷನ್ ಅಕ್ಕಿ ಅಕ್ರಮವಾಗಿ ಸಾಗಾಟ: ಅಕ್ಕಿ, ಕಂಟೇನರ್ ಮತ್ತು ಲಾರಿ ಚಾಲಕ ವಶಕ್ಕೆ

ಹೊನ್ನಾವರ: ಬಡವರಿಗೆ ಹಂಚಬೇಕಿದ್ದ ಸುಮಾರು 500 ಕ್ವಿಂಟಾಲ್ ರೇಷನ್ ಅಕ್ಕಿಯನ್ನು ಕಂಟೇನರ್ ಗಳಲ್ಲಿ ತುಂಬಿಕೊoಡು ಅಕ್ರಮವಾಗಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಲಾಗಿದ್ದು, ಹೊನ್ನಾವರ ಪೊಲೀಸರು ದಾಳಿ ನಡೆಸಿ ಅಕ್ಕಿ, ಲಾರಿ ಮತ್ತು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯ ಅಕ್ಕಿ ಆಲೂರಿನಿಂದ ಮಂಗಳೂರು ಕಡೆಗೆ ಕಂಟೇನರ್ ಗಳಲ್ಲಿ ಅಕ್ಕಿಯನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.

ರೇಷನ್ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ರೇಷನ್ ಅಕ್ಕಿಯನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು. ಇದರ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ. ಸಿ.ಪಿ.ಐ ಶ್ರೀಧರ್ ಎಸ್.ಆರ್, ಪಿ.ಎಸ್.ಐ ಶಶಿಕುಮಾರ್, ಪೊಲೀಸ್ ಕಾನಸ್ಟೇಬಲ್ ಮಹಾವೀರ್ ಸೇರಿದಂತೆ ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಇದ್ದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button