![](http://i0.wp.com/vismaya24x7.com/wp-content/uploads/2021/11/Screenshot_2021-11-22-14-09-44-69_da7e740d39e74153334aa32d3c53af2b2.jpg?fit=1080%2C753&ssl=1)
ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಗಾಂಜಾ ಘಾಟು ಹೆಚ್ಚುತ್ತಿದ್ದು, ಹೀಗಾಗಿ ಪೊಲೀಸರು ಬಿಸಿಮುಟ್ಟಿಸುತ್ತಿದ್ದಾರೆ. ಇದೀಗ ಗಾಂಜಾ ಮಾರಾಟ ಮತ್ತು ಸೇವನೆ ಆರೋಪದಲ್ಲಿ ಶಿರಸಿಯ ವಿವಿಧೆಡೆ ದಾಳಿ ನಡೆಸಿದ ಪೊಲೀಸರು 15 ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
![](http://i0.wp.com/vismaya24x7.com/wp-content/uploads/2021/11/Screenshot_2021-11-22-14-09-24-69_da7e740d39e74153334aa32d3c53af2b.jpg?resize=708%2C458&ssl=1)
ಈ ಕಾರ್ಯಾಚರಣೆಯಲ್ಲಿ ಒಟ್ಟು 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ನಗರದ ನೆಹರು ನಗರ, ಕಸ್ತೂರಬಾ ನಗರ, ಸೇರಿದಂತೆ ಹಲವಡೆ ಪೊಲೀಸರು ದಾಳಿ ನಡೆಸಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಾಗಿ ವೈದ್ಯಕೀಯ ಪರೀಕ್ಷೆಗೆ ಯುವಕರನ್ನು ಉಡುಪಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಈ ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಗಾಂಜಾಸೇವನೆ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
![](http://i0.wp.com/vismaya24x7.com/wp-content/uploads/2021/08/nityadhar-2.png?resize=708%2C266&ssl=1)