Important
Trending

ಸಾರಿಗೆ ಬಸ್ ಗೆ ಡಿಕ್ಕಿಹೊಡೆದ ಕಾರು: ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ವಾಲಿದ ಬಸ್ : ಪ್ರಯಾಣಿಕರಿಗೆ ಗಾಯ


ಯಲ್ಲಾಪುರ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ರಸ್ತೆ ಪಕ್ಕಕ್ಕೆ ಅರ್ಧ ವಾಲಿದ ಘಟನೆ ಇಲ್ಲಿನ ಆರ್ತಿಬೈಲ್ ಬಳಿ ನಡೆದಿದೆ. ಅಂಕೋಲಾ ಘಟಕಕ್ಕೆ ಸೇರಿದ ಸಾರಿಗೆ ಬಸ್ ಗೆ ಯಲ್ಲಾಪುರ ತಾಲೂಕಿನ ಇಡಗುಂದಿ ಆರ್ತಿಬೈಲ್ ಬಳಿ ವೇಗದಲ್ಲಿ ಬಂದ ಬೆಂಗಳೂರು ನೋಂದಣಿಯ ಕಾರು ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ. ರಸ್ತೆ ಪಕ್ಕದಲ್ಲಿ ಜಾಹೀರಾತು ಕಂಬವೊoದು ಇದ್ದಿದ್ದರಿಂದ ಬಸ್ ಅದಕ್ಕೆ ತಾಗಿಕೊಂಡು ವಾಲಿ ನಿಂತಿದೆ.

ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಹಾನಿಯಾಗಿಲ್ಲ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸಾರಿಗೆ ಬಸ್ ಪ್ರಯಾಣಿಕರು ಕೆಲಕಾಲ ಆತಂಕ ಎದುರಿಸುವಂತಾಯಿತು. ರಸ್ತೆ ಪಕ್ಕದಲ್ಲಿ ಜಾಹೀರಾತು ಕಂಬ ಇಲ್ಲದಿದ್ದರೆ ಬಸ್ ಹೊಂಡಕ್ಕೆ ಬೀಳುವ ಸಾಧ್ಯತೆ ಇತ್ತು. ಡಿಕ್ಕಿಯ ರಭಸದಿಂದಾಗಿ ಬಸ್ ಹಾಗೂ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button