Follow Us On

WhatsApp Group
Important
Trending

ಪ್ರವಾಸಕ್ಕೆಂದು ಬಂದು ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋಗಿ ಸಾವು: ಇನ್ನೊಬ್ಬನ ಸ್ಥಿತಿ ಗಂಭೀರ

ಮುರುಡೇಶ್ವರ: ಇಲ್ಲಿಗೆ ಪ್ರವಾಸಕ್ಕೆಂದು ಬಂದ ಇಬ್ಬರು ಯುವಕರು ಮೋಜು-ಮಸ್ತಿಯೆಂದು ಸಮುದ್ರಕ್ಕೆ ಇಳಿದಿದ್ದ ವೇಳೆ ಓರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ತೂದಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಇನ್ನೊರ್ವ ಪ್ರವಾಸಿಗ ಬಸವರಾಜು(21) ಎನ್ನುವವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆತ ಹೊಡೆತಕ್ಕೆ ಈರ್ವರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಓರ್ವನನ್ನು ರಕ್ಷಣೆ ಮಾಡಲಾಗಿದೆ.

ರಕ್ಷಣೆ ಮಾಡಿದ ಬಸವರಾಜ್ ಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ರಘುನಂದನ್ ಮಾತ್ರ ಅಲೆಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದು, ಕೆಲ ತಾಸುಗಳ ಬಳಿಕ ರಘುನಂದನ್ ಮೃತದೇಹ ಪತ್ತೆಯಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button