ಅಕ್ರಮವಾಗಿ ಮದ್ಯ ದಾಸ್ತಾನು: ಪ್ರತ್ಯೇಕ ಮೂರು ಪ್ರಕರಣ ದಾಖಲು

ಸಿದ್ದಾಪುರ : ತಾಲೂಕಿನ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೋಗಿನಮಠ ಗ್ರಾಮದಲ್ಲಿ ಮಾರಾಟಕ್ಕಾಗಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿಟ್ಟಿದ್ದನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ, ಜಪ್ತುಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಜೋಗಿನಮಠದ ಬಸವರಾಜ ನಾಯ್ಕ ಹಾಗೂ ರಮೇಶ ನಾಯ್ಕ ಮತ್ತು ಬಂಗಾರ್ಯ ನಾಯ್ಕ ಇವರುಗಳ ಮನೆಯಲ್ಲಿ ದಾಳಿ ನಡೆಸಲಾಗಿ ಮಾರಾಟಕ್ಕಾಗಿ ದಾಸ್ತಾನಿಟ್ಟಿದ್ದ ಮದ್ಯವನ್ನು ಪತ್ತೆ ಹಚ್ಚಿ ಅವುಗಳನ್ನು ಜಪ್ತುಪಡಿಸಲಾಗಿದೆ.

ಈ ಕುರಿತು ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಾಳಿಯ ವೇಳೆ ಕೆಲ ಆರೋಪಿಗಳು ಓಡಿ ತಪ್ಪಿಸಿಕೊಂಡಿದ್ದು, ಶೀಘ್ರವಾಗಿ ಬಂಧಿಸಲಾಗುವುದು. ಜಪ್ತು ಪಡಿಸಿದ ಮದ್ಯದ ಬೆಲೆ ರೂ.39 ಸಾವಿರ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version