Follow Us On

WhatsApp Group
Focus News
Trending

ಚಾಲಕನ ನಿಯಂತ್ರಣ ತಪ್ಪಿ ಸುರಕ್ಷಾ ತಡೆಬೇಲಿ ದಾಟಿ ಗಟಾರಕ್ಕಿಳಿದ ಟ್ಯಾಂಕರ್

ಯಲ್ಲಾಪುರ: ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಆರತಿಬೈಲ್ ತಿರುವಿನಲ್ಲಿ ನಡೆದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಟ್ಯಾಂಕರ್, ಆರತಿಬೈಲ್ ಘಟ್ಟದ ಇಳಿಜಾರಿನ ಅಪಾಯಕಾರಿ ತಿರುವಿನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿದೆ. ಈ ವೇಳೆ ಟ್ಯಾಂಕರ್ ನ ಮುಂಭಾಗ ಸುರಕ್ಷತೆಗಾಗಿ ಇರುವ ತಡೆಬೇಲಿ ದಾಟಿ ಗಟಾರಕ್ಕಿಳಿದಿದೆ. ಅದೃಷ್ಟವಶಾತ್ ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಈ ಪ್ರದೇಶದಲ್ಲಿ ಹೆದ್ದಾರಿ ಸಂಪೂರ್ಣ ಹಾಳಾಗಿದೆ. ಸಮರ್ಪಕ ನಿರ್ವಹಣೆ ಇಲ್ಲದೆ ಇರದಿರುವುದಿಂದ ಇಂತಹ ಅವಘಡಗಳು ಪದೇ ಪದೇ ಸಂಭವಿಸುತ್ತಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button