Follow Us On

WhatsApp Group
Focus News
Trending

ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2021: ಇಂದು ಆರ್.ವಿ. ದೇಶಪಾಂಡೆ ಹೊನ್ನಾವರಕ್ಕೆ

ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2021 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೀಮಣ್ಣಾ ನಾಯ್ಕರ ಚುನಾವಣಾ ಪ್ರಚಾರಾರ್ಥ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಇಂದು ಹೊನ್ನಾವರ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.

ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಟ್ಟಣದ ಪ್ರಭಾತನಗರದಲ್ಲಿರುವ “ಸಾಗರ ರೆಸಿಡೆನ್ಸಿ” ಸಭಾಭವನದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರಾರ್ಥ ಏರ್ಪಡಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಭೆಯಲ್ಲಿ ಮಾಜಿ ಶಾಸಕಿ ಶ್ರೀಮತಿ ಶಾರದಾ ಎಮ್. ಶೆಟ್ಟಿ, ಪಟ್ಟಣ ಮತ್ತು ಗ್ರಾಮ ಪಂಚಾಯತದ ಸದಸ್ಯರುಗಳು, ಪಕ್ಷದ ವಿವಿಧ ಪದಾಧಿಕಾರಿಗಳು ಭಾಗವಹಿಸುವ ಈ ಸಭೆಯಲ್ಲಿ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳ್ಳುವಂತೆ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Back to top button