Follow Us On

WhatsApp Group
Big News
Trending

ತನ್ನ ಮದುವೆಯ ಲಗ್ನ ಪತ್ರಿಕೆ ಹಂಚಲು ಹೋದ ಯುವತಿ ನಾಪತ್ತೆ: ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡ ಮನೆಯವರು ಕಂಗಾಲು

ಮುoಡಗೋಡ: ತನ್ನ ಮದುವೆಯ ಲಗ್ನ ಪತ್ರಿಕೆ ಹಂಚಲು ಹೋದ ಯುವತಿಯೊಬ್ಬಳು ಏಕಾಏಲಕಿ ನಾಪತ್ತೆಯಾದ ಘಟನೆ ತಾಲೂಕಿನ ಕರಗಿನಕೊಪ್ಪದಲ್ಲಿ ನಡೆದಿದೆ. ಮದುವೆಯ ಲಗ್ನ ಪತ್ರಿಕೆಯನ್ನು ಸ್ನೇಹಿತರಿಗೆ ಕೊಡಲು ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವಳು ಮರಳಿ ಮನೆಗೆಬಾರದೆ ನಾಪತ್ತೆಯಾಗಿದ್ದಾಳೆ. ಅನಿತಾ ನಾಗಪ್ಪ ತಾಂಬೆ (21) ಎಂಬವಳೆ ನಾಪತ್ತೆಯಾದ ಯುವತಿ ಯಾಗಿದ್ದಾಳೆ.

ಈ ಕುರಿತು ಅನಿತಾಳ ಅಜ್ಜಿ ರೇಣುಕಾ ಎಂಬವರು ದೂರು ದಾಖಲಿಸಿದ್ದಾರೆ. ಈ ಯುವತಿಗೆ ತಂದೆ ತಾಯಿ ಇಲ್ಲದ ಕಾರಣ ಅಜ್ಜಿಯ ಮನೆಯಲ್ಲಿ ಬೆಳೆದಿದ್ದಾಳೆ. ಇದೀಗ ಅಜ್ಜಿಯ ಮನೆಯವರು ಅನಿತಾಳ ಮದುವೆ ನಿಶ್ಚಯ ಮಾಡಿ ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಅಲ್ಲದೆ, ಲಗ್ನಪತ್ರಿಕೆ ತಯಾರಿಸಿ ಹಂಚಿಕೆ ಮಾಡಿದ್ದಾರೆ. ತನ್ನ ಮದುವೆಗೆ ಬೇಕಿರುವ ಎಲ್ಲ ಸಾಮಗ್ರಿಗಳನ್ನು ಸಂಗ್ರಹಿಸಿದ್ದರು. ಆದರೆ, ಇದೀಗ ಏಕಾಏಕಿ ಮದುವೆ ಹೆಣ್ಣು ನಾಪತ್ತೆಯಾಗಿರುವುದು ಮನೆಯವರು ಕಂಗಾಲು ಆಗುವಂತೆ ಮಾಡಿದೆ. ಯುವತಿ ಪಕ್ಕದ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಆತನೊಂದಿಗೆ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button