Follow Us On

WhatsApp Group
Important
Trending

ಕೊಟ್ಟಿಗೆಯಲ್ಲಿದ್ದ ಆಕಳ ಕುರುವಿನ ಮೇಲೆ ಚಿರತೆ ದಾಳಿ: ಕರು ಸಿಗದಿದ್ದಾಗ ನಾಯಿ ಹೊತ್ತೊಯ್ದ ಚಿರತೆ

ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾಪಂ ವ್ಯಾಪ್ತಿಯ ಬಿಸಗೊಡದ ನಾಗರಕಾನ್ ಎಂಬಲ್ಲಿ ಆಕಳ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ್ದು, ಕರು ಗಂಭೀರವಾಗಿ ಗಾಯಗೊಂಡಿದೆ. ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರಿಂದ ಹೊತ್ತೊಯ್ಯಲು ಸಾಧ್ಯವಾಗಿಲ್ಲ. ಈ ವೇಳೆ ಚಿರತೆ ಕರುವನ್ನು ಬಿಟ್ಟು ನಾಯಿಯನ್ನು ಹಿಡಿದೊಯ್ಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ಚಿರತೆಯ ಕಾಟ ಹೆಚ್ಚಿದ್ದು, ಕಳೆದ ಎರಡು ವಾರಗಳ ಹಿಂದೆ ಮೂರು ದನಗಳಳ ಮೇಲೆ ಚಿರತೆ ದಾಳಿ ನಡೆಸಿ, ಕೊಂದಿತ್ತು. ಚಿರತೆ ಕಾಟವನ್ನು ನಿಯಂತ್ರಿಸುವoತೆ ಅರಣ್ಯ ಇಲಾಖೆಯನ್ನು ಸ್ಥಳೀಯರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button