ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ‌ ಮಡಿದ ಸೇನಾನಿಗಳಿಗೆ ಸಂತಾಪ

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸರ್ವ ಸೇನಾ ಮುಖ್ಯಸ್ಥರಾದ ಶ್ರೀ. ಬಿಪಿನ್ ರಾವತ್, ಅವರ ಧರ್ಮಪತ್ನಿ ಹಾಗೂ ಸೇನೆಯ ಉನ್ನತ ಅಧಿಕಾರಿಗಳು ಹೆಲಿಕಾಪ್ಟರ್ ದುರಂತದಲ್ಲಿ ಅಕಾಲಿಕ ಮರಣಹೊಂದಿರುವ ಕುರಿತು ದಿಗ್ಭ್ರಮೆ ಹಾಗೂ ಅತೀವ ಸಂತಾಪ ವ್ಯಕ್ತಪಡಿಸಲಾಯಿತು ಹಾಗೂ ಮೃತರ ಸದ್ಗತಿಯನ್ನು ಪ್ರಾರ್ಥಿಸಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.

ಸ್ಥಳೀಯ ಎಲ್ಲ ಮಹಾವಿದ್ಯಾಲಯಗಳಲ್ಲಿಯೂ ಮೌನ ಆಚರಣೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಾ. ಪ್ರೀತಿ ಭಂಡಾರಕರ, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಶಿಕ್ಷಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್ ಕುಮಟಾ

Exit mobile version