ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ ಕರಡಿ: ವ್ಯಕ್ತಿ ಗಂಭೀರ ಗಾಯ

ಕಾರವಾರ: ಕರಡಿಯೊಂದು ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನಗೆ ಗ್ರಾಮದ ಮಲ್ಲಾಪುರ ಅರಣ್ಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಮಗೌಡ ಎಂಬ ವ್ಯಕ್ತಿ ಕರಡಿ ದಾಳಿಗೆ ಒಳಗಾಗಿದ್ದು, ಇವರನ್ನು ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version