ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಗುದ್ದಿದ ಬೈಕ್: ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

ಶಿರಸಿ: ಮಹಿಳೆಯೊಬ್ಬಳು ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಬೈಕ್ ಸವಾರನೊಬ್ಬ ಆಕೆಗೆ ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಹತ್ತಿರವಿರುವ ಸೇತುವೆ ಬೈಕ್‌ನ್ನು ತಗುಲಿಸಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಬನವಾಸಿ ಸಮೀಪದ ಬೋರ್ನಗುಡ್ಡ ಬಳಿ ನಡೆದಿದೆ. ಕೃಷ್ಣ ಎಂಬಾತನೇ ಸಾವು ಕಂಡ ಬೈಕ್ ಸವಾರ ಎಂದು ತಿಳಿದುಬಂದಿದೆ.

ಈತ ಅತಿ ವೇಗವಾಗಿ ಬೈಕ್ ಅನ್ನು ಚಲಾಯಿಸಿಕೊಂಡು ಬಂದು ದನಕಾಯುತ್ತಿದ್ದ ಪಾರ್ವತಿ ಯಲ್ಲಪ್ಪವಡ್ಡರ್ (60) ಎಂಬಾಕೆಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ನಿಯಂತ್ರಣ ತಪ್ಪಿ ಸಮೀಪದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದು ಅಲ್ಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಬನವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version