ಕುಮಟಾದ ನ್ಯಾಯಾಲಯದಲ್ಲಿ ಡಿಸೆಂಬರ್ 18 ರಂದು ಬೃಹತ್ ಲೋಕ ಅದಾಲತ್

ಕುಮಟಾ: ನ್ಯಾಯಾಲಯದಲ್ಲಿ ದಾಖಲಾಗಿರುವ ಕುಮಟಾ ತಾಲೂಕಿನ ವಿವಿಧ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಬಗೆಹರಿಸಿಕೊಳ್ಳುವ ಉದ್ಧೇಶದಿಂದ ಕುಮಟಾದ ನ್ಯಾಯಾಲಯದಲ್ಲಿ ಡಿಸೆಂಬರ್ 18 ರಂದು ಬೃಹತ್ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ ನಾಯಕ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನರೇಂದ್ರ ಬಿ.ಆರ್ ಅವರನ್ನು ಒಳಗೊಂಡAತೆ ತಾಲೂಕಾ ಕಾನೂನು ಸೇವಾ ಸಮಿತಿ ತಿಳಿಸಿದೆ.

ಈ ಒಂದು ಬೃಹತ್ ಲೋಕ ಅದಾಲತ್ ನಲ್ಲಿ ದೌರ್ಜನ್ಯ ನಷ್ಟ ಪರಿಹಾರ ಕುರಿತು ತಕರಾರು, ಮೋಟಾರ್ ವೆಹಿಕಲ್ ಪ್ರಕರಣಗಳು, ಬ್ಯಾಂಕುಗಳ ಸಾಲ ವಸೂಲಿ, ಸಿವಿಲ್ ವ್ಯಾಜ್ಯಗಳು, ಚೆಕ್ ಬೌನ್ಸ್ ಪ್ರಕರಣಗಳು ಸೇರಿದಂತೆ ಹಲವು ಬಗೆಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳುಲು ಅವಕಾಶವಿದೆ. ಕಕ್ಷಿದಾರರಿಗೆ ಯಾವುದೇ ರೀತಿಯ ಖರ್ಚಿಲ್ಲದೆ ತ್ವರಿತವಾಗಿ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version