ಶಾಲೆಯೊಂದರ 16-17 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್? 218 ಮಾದರಿಗಳನ್ನು ಓಮಿಕ್ರಾನ್ ಪರೀಕ್ಷೆಗೆ ರವಾನೆ: ಜಿಲ್ಲಾಧಿಕಾರಿಗಳು ಹೇಳಿದ್ದೇನು ನೋಡಿ?

ಕಾರವಾರ: ಜೊಯಿಡಾ ರಾಮನಗರದ ವಸತಿ ಶಾಲೆಯೊಂದರಲ್ಲಿ ಸುಮಾರು 17 ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಪ್ರಯೋಗಾಲಯದಿಂದ ಮಾಹಿತಿ ಬಂದಿರುವ ಕಾರಣ ಆ ಶಾಲೆಯನ್ನು ಕೋವಿಡ್ ಕ್ಲಸ್ಟರನ್ನಾಗಿ ಪರಿವರ್ತಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಕ್ಲಸ್ಟರ್ಸ್ ಆಗಿರಲಿಲ್ಲ. ಸಿದ್ದಾಪುರದ ಶಾಲೆ- ಕಾಲೇಜುಗಳಲ್ಲಿ ಮೂರು- ನಾಲ್ಕು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದ್ದನ್ನು ಹೊರತುಪಡಿಸಿ ಕ್ಲಸ್ಟರ್ಸ್ ಮಾಡುವಷ್ಟು ಸೋಂಕಿತರು ಪತ್ತೆಯಾಗಿರಲಿಲ್ಲ. ಹೀಗಾಗಿ ಶಾಲೆಯ ಸುಮಾರು 60 ವಿದ್ಯಾರ್ಥಿಗಳ ಗಂಟಲು ದ್ರವ ಪಡೆದು ತಪಾಸಣೆಗೆ ಕಳುಹಿಸಲಾಗಿತ್ತು. ಇದರಲ್ಲಿ ಸುಮಾರು 15-17 ಮಂದಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಬಂದಿದೆ ಎಂದು ತಿಳಿಸಿದರು.

ಮತ್ತೊಂದು ಬ್ಲಾಕ್ ನಲ್ಲಿ ಉಳಿದ ವಿದ್ಯಾರ್ಥಿಗಳನ್ನು ಐಸೋಲೇಟ್ ಮಾಡಿ, ಮೂರು ದಿನಗಳವರೆಗೆ ನಿಗಾದಲ್ಲಿಟ್ಟು, ನಂತರ ಮುಂದಿನ ಕ್ರಮ ಕೈಗೊಳ್ಳಲು ತಂಡವನ್ನು ಕಳುಹಿಸಿದ್ದೇವೆ.ಇನ್ನೂ ಅಧಿಕೃತ ಫಲಿತಾಂಶ ಬಂದಿಲ್ಲವಾದರೂ, ಶಾಲೆಯನ್ನು ಕಂಟೋನೈಂಟ್ ಝೂನ್ ಎಂದುಘೋಷಿಸಿ, ಈಗ ಕ್ಲಸ್ಟರ್ ಆಗಿ ಪರಿವರ್ತಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಮಾದರಿಯನ್ನೂ ಜಿನೋಮ್ ಪರೀಕ್ಷೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಅಲ್ಲದೆ, ಇದೇ ವೇಳೆ ಜಿಲ್ಲೆಯಲ್ಲಿ ಒಮಿಕ್ರಾನ್ ಡಿಎನ್‌ಎ ಸೀಕ್ವೆನ್ಸ್ ಇದೆಯೇ ಎಂದು ಪತ್ತೆ ಹಚ್ಚಲು ಸುಮಾರು 218 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದೆ. ಈಗಾಗಲೇ ಬಹುತೇಕ ವರದಿ ಬಂದಿದ್ದು, ನೆಗೆಟಿವ್ ಬಂದಿದೆ ಎಂದರು.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version