Follow Us On

WhatsApp Group
Important
Trending

ಹಣದ ಸಮಸ್ಯೆಯಿಂದಾಗಿ ಮದುವೆ ನಿಶ್ಚಯವಾಗಿದ್ದ ವ್ಯಕ್ತಿ ಸಾವಿಗೆ ಶರಣು: ಮನೆಯ ಹಿಂಬದಿಯ ಬೆಟ್ಟದಲ್ಲಿ ಶವಪತ್ತೆ

ಸಿದ್ದಾಪುರ: ಮದುವೆಗೆ ಉಂಟಾದ ಹಣದ ಸಮಸ್ಯೆಯನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ತಾಲೂಕಿನ ಶಿರಗಳ್ಳೆ ಯಲ್ಲಿ ನಡೆದಿದೆ. ಮಹೇಶ್ ಮಂಜುನಾಥ್ ನಾಯ್ಕ್ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಧಾರವಾಡದ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದನಿಗೆ ಇತ್ತಿಚೆಗೆ ಮದುವೆ ನಿಶ್ಚಯವಾಗಿತ್ತು.

ಮದುವೆಗೆ ಹಣ ಹೇಗೆ ಹೊಂದಿಸುವುದು ಎಂದು ಮನಸ್ಸಿಗೆ ಹಚ್ಚಿಕೊಂಡಿದ್ದ ಎನ್ನಲಾಗಿದೆ. ತೋಟದ ಕೆಲಸಕ್ಕೆ ಹೋದವನು ತೋಟದಿಂದ ಮನೆಗೆ ಹೋಗುತ್ತೇನೆಂದು ಹೇಳಿ ಹೋದವನು ಮನೆಗೆ ಬಾರದೆ ಕಾಣೆಯಾಗಿದ್ದನು. ಹುಡುಕುತ್ತಿರುವಾಗ ಮನೆಯ ಹಿಂದಿರುವ ಬೆಟ್ಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಂಡಿದ್ದಾನೆ. ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button