ದೀರ್ಘ ಕಾಲದ ಕಾಯಿಲೆಯಿಂದ ಮನನೊಂದು ಶರಾವತಿ ನದಿಗೆ ಹಾರಿ ವ್ಯಕ್ತಿ ಸಾವಿಗೆ ಶರಣು

ಹೊನ್ನಾವರ: ದೀರ್ಘ ಕಾಲದ ಕಾಯಿಲೆಯಿಂದ ಮನನೊಂದಿದ್ದ ಎನ್ನಲಾದ ವ್ಯಕ್ತಿಯೊಬ್ಬನು ತಾಲೂಕಿನ ಶರಾವತಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಾರು 23 ವರ್ಷದ ಕಾಸರಕೋಡ ಹಿರೇಮಠದಲ್ಲಿ ವಾಸವಾಗಿದ್ದ ಕೊಪ್ಪಳ ಶಿರಗುಂಪಿಯ ಸಚಿನ ದೇಸಾಯಿ ಆತ್ಮಹತ್ಯೆಗೆ ಶರಣಾದವ ವ್ಯಕ್ತಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೊನ್ನಾವರ: ಕಾಂಪ್ಲೆಕ್ಸ್ ಒಂದರ ಎ.ಟಿ.ಎಂ ರೂಮ್ ನ ಮುಂಬಾಗದಲ್ಲಿಯೇ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾತ್ತು. ತಾಲೂಕಿನ ಮಂಕಿ ದೊಡ್ಡಗುಂದದ ಉಲ್ಲಾಸ ನಾಯ್ಕ (50) ಮೃತಪಟ್ಟ ವ್ಯಕ್ತಿ. ಈತ ಭಿಕ್ಷೆ ಬೇಡುತ್ತಾ ತಿರುಗುತ್ತಿದ್ದು, ಅನಾರೋಗ್ಯಕ್ಕೆ ಒಳಗಾಗಿ ಎಟಿಎಂ ಎದುರಿನಲ್ಲಿ ಮಲಗಿದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version