ಪತಿಯೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಬಂದ ನವವಿವಾಹಿತೆ ನಾಪತ್ತೆ: ಪತಿ ಗೆಸ್ಟ್ ಹೌಸ್ ಗೆ ಹೋಗಿ ವಾಪಸ್ ಬಂದು ನೋಡಿದರೆ ಪತ್ನಿಯೇ ಇಲ್ಲ


ಮುರ್ಡೇಶ್ವರ: ಪತಿಯೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಬಂದ ನವವಿವಾಹಿತೆಯೋರ್ವಳು ಕಾಣೆಯಾದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನವವಿವಾಹಿತೆಯೊಬ್ಬಳು ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿ ರೂಮ್ ನೋಡಲು ಪತಿ ಗೆಸ್ಟ್ ಹೌಸ್ ಗೆ ಹೋಗಿ ವಾಪಸ್ ಬಂದು ನೋಡಿದಾಗ ಪಾರ್ಕಿಂಗ್ ಸ್ಥಳದ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆ ಕಾಣೆಯಾಗಿದ್ದಾಳೆ.

ಗೋವಾದ ವಾಸ್ಕೋಡಗಾಮ ಬೈನಾದ ನಿವಾಸಿ ವಿದ್ಯಾ ಸಂದೀಪ ಹರಿಜನ ಕಾಣೆಯಾದ ಮಹಿಳೆ. ಎಷ್ಟು ಹುಡುಕಿದರೂ ಮಹಿಳೆ ಪತ್ತೆಯಾಗಿಲ್ಲ. ಹೀಗಾಗಿ ಮುರ್ಡೇಶ್ವರ ಠಾಣೆಯಲ್ಲಿ ಆಕೆಯ ಪತಿ ದೂರು ದಾಖಲಿಸಿದ್ದು ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version