Follow Us On

WhatsApp Group
Important
Trending

ವಿದ್ಯುತ್ ಕಿಡಿಬಿದ್ದು ಅವಾಂತರ: ತೆಂಗಿನಕಾಯಿ ಪ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅಪಾರ ಹಾನಿ

ಕುಮಟಾ: ತೆಂಗಿನಕಾಯಿ ಪ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ, ಹಾನಿ ಸಂಭವಿಸಿದ ಘಟನೆ ತಾಲೂಕಿನ ಹಂದಿಗೋಣದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಎರಡು ಸಾವಿರಕ್ಕೂ ಅಧಿಕ ತೆಂಗಿನಕಾಯಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ರಾತ್ರಿ ವೇಳೆ ಈ ಅವಘಡ ಸಂಭವಿಸಿದ್ದರಿoದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತೆಂಗಿನಕಾಯಿ ಪ್ಯಾಕ್ಟರಿಯ ಮೇಲ್ಬಾಗದಲ್ಲಿ ವಿದ್ಯುತ್ ತಂತಿ ಹಾದುಹೋಗಿದ್ದು, ವಿದ್ಯುತ್ ಕಿಡಿಬಿದ್ದು, ಪ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button