ಭಟ್ಕಳದ ನವೀನ ದಾಸ ನಾಯ್ಕ ಯುನಿವರ್ಸಿಟಿ ಬ್ಲೂ: ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿ

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕಬಡ್ಡಿ ಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ. ನವೀನ ದಾಸ ನಾಯ್ಕ ಇವನು ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿ ತಿರುಚನಾಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ಜರುಗುತ್ತಿರುವ ಅಂತರ ವಿಶ್ವವಿದ್ಯಾಲಯ-ರಾಷ್ಟçಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣವಲಯವನ್ನು ಪ್ರತಿನಿಧಿಸಿ, ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.

ವಿಸ್ಮಯ ನ್ಯೂಸ್, ಭಟ್ಕಳ

Exit mobile version