ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರೇಂಜ್ ರೋವರ್ ಕಾರು ಡಿಕ್ಕಿ: ತೀವ್ರ ಪೆಟ್ಟು : ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು

ಅಂಕೋಲಾ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಆತ ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಬಾಳೆಗುಳಿಯ ವರದರಾಜ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಧಾರವಾಡ ಜಿಲ್ಲೆಯ ಕಿತ್ತೂರು ನಿವಾಸಿ ರಾಜು ನಾಗಪ್ಪ ಕಿತ್ತೂರು (40) ಅಪಘಾತದಿಂದ ಗಾಯಗೊಂಡ ವ್ಯಕ್ತಿ ಯಾಗಿದ್ದು, ಈತ ಇಲ್ಲಿಯ ಹೊಟೆಲೊಂದರಲ್ಲಿ ಕೆಲಸಕ್ಕಿದ್ದ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಪಾದಾಚಾರಿಯ ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ತಾಲೂಕ ಆಸ್ಪತ್ರೆಗೆ ಕರೆತಂದು,ಪ್ರಾಥಮಿಕ ಚಿಕಿತ್ಸೆ ನೀಡಿ ,ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕೋಲಾ ಕಡೆಯಿಂದ ಕಾರವಾರ ಕಡೆ ಸಾಗುತ್ತಿದ್ದ ಜಿ.ಎ07/ಯು7000 ಬಡಿದ ಪರಿಣಾಮವಾಗಿ ಈ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ಅತಿ ವೇಗದ ಮತ್ತು ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರು ಚಾಲಕ ಕೇರಳ ತಿರೂರು ನಿವಾಸಿ ಸಾಬೀಲ್ ಕೋಯಕುಟ್ಟಿ ರೆಹಮಾನ್ ಎನ್ನುವವರ ಮೇಲೆ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Exit mobile version