Important
Trending

ಡೀಸೆಲ್ ತುಂಬಿದ ಟ್ಯಾಂಕರ್ ಪಲ್ಟಿ: ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ

ಹೊನ್ನಾವರ: ಮಂಗಳೂರಿನಿoದ ಹೊಸಪೇಟೆಗೆ ಹೋಗುತ್ತಿದ್ದ ಡೀಸೆಲ್ ತುಂಬಿದ ಟ್ಯಾಂಕರ್,, ಚಾಲಕನ ನಿಯಂತ್ರಣ ತಪ್ಪಿ ಹೊನ್ನಾವರ ತಾಲೂಕಿನ ಕರ್ಕಿ ನಾಕಾ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಪಲ್ಟಿಯಾದ ರಭಸಕ್ಕೆ ವಾಹನ ಒಂದು ಬದಿಯಲ್ಲಿ ಜಖಂ ಆಗಿ ಡೀಸೆಲ್ ಸೋರಿಕೆಯಾಗಿದೆ. ಡಿಸೇಲ್ ಸೋರಿಕೆಯಿಂದಾಗಿ ಸಮೀಪದ ಅಂಗಡಿ ಮುಂಗಟ್ಟುಗಳು ಹಾಗೂ ಮನೆಯವರು ಕೆಲ ಸಮಯ ಆತಂಕಕ್ಕೆ ಒಳಗಾಗಿದ್ದರು.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತ ಸಂಭವಿಸಿದoತೆ ಜಾಗೃತೆವಹಿಸಿದರು. ಟ್ಯಾಂಕರ್ ಚಾಲಕ ಹನುಮೇಗೌಡ ಯಾವುದೇ ಪ್ರಾಣಾಪಯವಿಲ್ಲದೇ ಪಾರಾಗಿದ್ದಾರೆ..ಈ ಸಂಭoದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button