ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಿ: ಎಬಿವಿಪಿ ಮನವಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಮಟಾ ಇದರ ಅತಿಥಿ ಉಪನ್ಯಾಸಕರ ಖಾಯಂಗೊಳಿಸಬೇಕು ಮತ್ತು ಅವರ ವೇತನ ಹೆಚ್ಚಳ ಮಾಡಬೇಕು ಎನ್ನುವ ವಿಷಯವಾಗಿ ಅವರ ಪ್ರತಿಭಟನೆ ನಡೆಯುತ್ತಿದೆ. ಈ ಕಾರಣವಾಗಿ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಅವರ ಮನವಿಗೆ ಸ್ಪಂದಿಸಬೇಕು ಮತ್ತು ತರಗತಿಗಳು ಪುನರಾರಂಭವಾಗುವoತೆ ಸಹಕರಿಸಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೋರಿದೆ. ಈ ಸಂದರ್ಭದಲ್ಲಿ ಸಂಚಾಲಕರಾದ ಸಂದೇಶ ನಾಯ್ಕ, ಜಿಲ್ಲಾ ಸಂಚಾಲಕ ಗಜೇಂದ್ರ ಹರಿಕಾಂತ ಕಾರ್ಯಕರ್ತರಾದ ಸುಜಲ್, ನಿಶಾಂತ, ಜೀತೆಂದ್ರ, ಶ್ರೀಧರ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಕುಮಟಾ

Exit mobile version