Follow Us On

WhatsApp Group
Important
Trending

ಕಾಡು ಹಂದಿಗೆ ಕುಣಿಕೆ ಹಾಕಲು ಹೋಗಿ, ಕಾನೂನಿನ ಕುಣಿಕೆಯಲ್ಲಿ ಸಿಲುಕಿದ ನಾಡ ಮಂದಿ ?. ಪ್ರಾಣಿ ಮಾಂಸ, ತಲೆ, ಇತರೆ ಭಾಗಗಳು ಹಾಗೂ ಉರುಳಿನೊಂದಿಗೆ ಆರೋಪಿಗಳ ವಶ : ನ್ಯಾಯಾಂಗ ಬಂಧನ

ಅಂಕೋಲಾ: ಉರುಳು ಹಾಕಿ ಕಾಡು ಹಂದಿ ಕೊಂದು ಮಾಂಸವನ್ನು ಬೇಯಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಮಾಂಸವನ್ನು ವಶಪಡಿಸಿಕೊಂಡ ಘಟನೆ ಮಾಸ್ತಿಕಟ್ಟೆ ವಲಯ ವ್ಯಾಪ್ತಿಯ ಅಗಸೂರು ಗ್ರಾಮದ ಈರನ ಮೂಲೆ ಮಜಿರೆಯಲ್ಲಿ ನಡೆದಿದೆ. ಈರನಮೂಲೆ ನಿವಾಸಿಗಳಾದ ಲಕ್ಷ್ಮಣ ರಾಕು ಗೌಡ, ಶಾಂತಾ ಗಣಪತಿ ಗೌಡ, ಗಣಪತಿ ಸುಕ್ರು ಗೌಡ ಬಂಧಿತ ಆರೋಪಿಯಾಗಿದ್ದು ಬಂಧಿತರಿಂದ ಕಾಡು ಹಂದಿ ಮಾಂಸ, ತಲೆ, ಇತರೆ ಭಾಗ ಮತ್ತು ಉರುಳನ್ನು ವಶಪಡಿಸಿಕೊಳ್ಳಲಾಗಿದೆ.

ಉಪ ವಲಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಅವರ ಮರ‍್ಗರ‍್ಶನದಲ್ಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ ಅವರ ನೇತೃತ್ವದಲ್ಲಿ ನಡೆದ ಕರ‍್ಯಾಚರಣೆ ಯಲ್ಲಿ ಮಾಸ್ತಿಕಟ್ಟೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮಳ್ಳಪ್ಪನವರ್, ಉಪ ವಲಯ ಅರಣ್ಯಾಧಿಕಾರಿ ಮಲ್ಲಿಕರ‍್ಜುನ ಅಂಗಡಿ, ರಾಘವೇಂದ್ರ ಜೀರಗಾಳೆ, ರತೀಶ ನಾಯಕ, ಗೌಡಪ್ಪ ಅಂಗಡಿ, ಅರುಣ ನಡಕಟ್ಟೆ, ಅರಣ್ಯ ರಕ್ಷಕ ವೆಂಕಟೇಶ ಗುತ್ತೇದಾರ, ಅಬಲಪ್ಪ, ರುದ್ರಗೌಡ ಪಾಟೀಲ್ ,ಪ್ರಶಾಂತ, ಚನ್ನಪ್ಪ ಲಮಾಣಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕಾಡು ಪ್ರಾಣಿಗೆ ಕುಣಿಕೆ ಹಾಕಲು ಹೋಗಿ, ತಾವೇ ಕಾನೂನಿನ ಕುಣಿಕೆಯಲ್ಲಿ ಸಿಲುಕಿ ಕೊಳ್ಳುವಂತಾಗಿದೆ ಎಂಬ ಮಾತು ಅಲ್ಲಲ್ಲಿ ಕೇಳಿ ಬಂದಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button