ಹೊಟ್ಟೆ ನೋವು ಮತ್ತು ಎದೆ ನೋವು ತಾಳಲಾರದೆ ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಅಂಕೋಲಾ: ಹೊಟ್ಟೆ ನೋವು ಮತ್ತು ಎದೆ ನೋವು ತಾಳಲಾರದೆ ವಿಷ ಸೇವಿಸಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತ ಪಟ್ಟ ಘಟನೆ ನಡೆದಿದೆ.

ಅವರ್ಸಾ ಗ್ರಾಪಂ ವ್ಯಾಪ್ತಿಯ ಸಕಲಬೇಣ ನಿವಾಸಿ ದತ್ತಾ ತಿಮ್ಮಾ ನಾಯ್ಕ (52) ಮೃತ ವ್ಯಕ್ತಿಯಾಗಿದ್ದು ಕೂಲಿ ಕೆಲಸ ಮಾಡುತ್ತಿದ್ದ ಈತ, ಸರಾಯಿ ಕುಡಿತದ ಗೀಳಿನಿಂದ ಅನಾರೋಗ್ಯಕ್ಕೆ ಈಡಾಗಿದ್ದ ಎನ್ನಲಾಗಿದೆ.

ಅನಾರೋಗ್ಯದಿಂದ ಮನನೊಂದ ಆತ ಮನೆಯಿಂದ ಹೊರಗೆ ಹೋಗಿ ವಿಷ ಸೇವಿಸಿಕೊಂಡು ಬಂದು, ವಾಂತಿ ಮಾಡುತ್ತಿದ್ದ ಎನ್ನಲಾಗಿದ್ದು, ಕುಟುಂಬಸ್ಥರು ಮತ್ತು ಸ್ಥಳೀಯರು ಈತನನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಕರೆತಂದು, ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ,ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಕೋಲಾ ಪೊಲೀಸ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version