Follow Us On

WhatsApp Group
Important
Trending

ನಸುಕಿನ ಜಾವ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತ : ಸ್ಥಳದಲ್ಲೇ ಒರ್ವನ ಸಾವು : ಇಬ್ಬರು ಗಂಭೀರ ?ಟ್ರಕ್‌ನ ಹಿಂಬದಿಯಲ್ಲಿ ಸಿಲುಕಿಕೊಂಡ ಕಾರು

ಅಂಕೋಲಾ: ತಾಲೂಕಿನ  ಹುಲಿದೇವರವಾಡ ವ್ಯಾಪ್ತಿಯ ಪೆಟ್ರೋಲ್ ಪಂಪ್ ಎದುರಿನ ರಾ.ಹೆ 66 ರಲ್ಲಿ ನಸುಕಿನ ಜಾವ ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಉಳಿದ ಈರ್ವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.     

ಅಂಕೋಲಾ ಕಡೆಯಿಂದ ಕಾರವಾರ ಮಾರ್ಗವಾಗಿ ಹೊರಟಿದ್ದ ಕೋಕ್ ಸಾಗಿಸುತ್ತಿದ್ದ ಲಾರಿಗೆ , ಹಿಂಬದಿಯಿಂದ ಬಂದ ಕಾರ್ ಅಪಘಾತ ಪಡಿಸಿಕೊಂಡಿದೆ ಎನ್ನಲಾಗಿದೆ., ನಸುಕಿನ ಜಾವದ ನಿದ್ದೆಯ ಮಂಪರ ಇಲ್ಲವೇ ಇತರೆ ಕಾರಣಗಳಿಂದ ಈ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಕಾರ ,ಟ್ರಕ್ ನ ಹಿಂಬದಿಯಲ್ಲಿ ಸಿಲುಕಿ ಕೊಳ್ಳುವಂತಾಗಿದ್ದು , ಕಾರಿನ ಮುಂಭಾಗ  ನುಜ್ಜುಗುಜ್ಜು ಗೊಂಡಿದೆ.

ಆಯ್ ಆರ್ ಬಿ ಸಿಬ್ಬಂದಿಗಳು, 112 ಪೋಲೀಸ್ ತುರ್ತು ವಾಹನ, ಸ್ಥಳೀಯರು, ಅಂಬುಲೆನ್ಸ್ ವಾಹನ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸಲು ಮುಂದಾಗಿ, ಅಸ್ಪತ್ರೆಗೆ ದಾಖಲಿಸಿದರು.ಕೇರಳದಿಂದ ಗೋವಾ ಕಡೆ ಕಾರನಲ್ಲಿ ಹೊರಟಿದ್ದರೆನ್ನಲಾದ, ಮೂವರಲ್ಲಿ ಚಾಲಕನ ಸ್ಥಿತಿ ಚಿಂತಾಜನಕ ಎನ್ನಲಾಗಿದೆ.

ಆತನ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿ ಸ್ಥಳದಲ್ಲೇ ಮೃತ್ ಪಟ್ಟಿದ್ದು, ಹಿಂಬದಿ ಸೀಟಿನಲ್ಲಿದ್ದ ಪ್ರಯಾಣಿಕನೂ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಪಿಎಸ್ಐ ಪ್ರವೀಣ  ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಹೆದ್ದಾರಿ ಸುಗಮ ಸಂಚಾರಕ್ಕೆ ಕರ್ತವ್ಯ ನಿರ್ವಹಿಸಿದರು.ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ನಾಯ್ಕ ಶವವನ್ನು ಸಾಗಿಸಲು ಸಹಕರಿಸಿದರು. ಅಪಘಾತದ ಕುರಿತು ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.               

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button