Important
Trending

ಮನೆಯ ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ವ್ಯಕ್ತಿ ರೈಲ್ವೆ ಹಳಿಯಲ್ಲಿ ಮಲಗಿ ಸಾವಿಗೆ ಶರಣು

ಅಂಕೋಲಾ: ತಾಲೂಕಿನ ಹುಲಿದೇವರವಾಡದ ಹತ್ತಿರ ರೈಲ್ವೆ ಹಳಿ ಪಕ್ಕದಲ್ಲಿ ಯುವಕನೋರ್ವನ ಮೃತ ದೇಹ ಪತ್ತೆಯಾಗಿದ್ದು ಮೃತ ಯುವಕನನ್ನು ಪಟ್ಟಣದ ಅಂಬಾರಕೊಡ್ಲ ನಿವಾಸಿ ವಸಂತ ವೆಂಕಟ್ರಮಣ ಗೌಡ (27) ಎಂದು ಗುರುತಿಸಲಾಗಿದೆ. 

ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುತ್ತ , ಬಡ ಕುಟಂಬಕ್ಕೆ ಆಸರೆಯಾಗಿದ್ದ ಈತ ಅದಾವುದೋ ಕಾರಣದಿಂದ ಮನನೊಂದು  ಬುಧವಾರ ರಾತ್ರಿ ಸಮಯದಲ್ಲಿ ರೈಲ್ವೆ ಹಳಿಯಲ್ಲಿ ಮಲಗಿ, ಅತ್ಯಹತ್ಯೆಗೆ ಶರಣಾದಂತಿದೆ. ರೈಲಿನಡಿ ಸಿಲುಕಿ ಆತನ ಭುಜದ ಭಾಗ ದೂರ ಸಿಡಿದು ಬಿದ್ದಿರುವುದು ನೋಡಲು ಭಯಾನಕ ಎನಿಸುವಂತಿದೆ.

ಕಳೆದ ಕೆಲ  ದಿನಗಳಿಂದ  ಆಗಾಗ ತನಗೆ ಹೊಟ್ಟೆ ನೋವು ಭಾಧಿಸುತ್ತಿದೆ  ಎಂದು ಈ ಅವಿವಾಹಿತ ಯುವಕ ತನ್ನ ಹತ್ತಿರದವರಲ್ಲಿ ಹೇಳಿಕೊಂಡಿದ್ದ ಎಂಬ ಮಾತು ಕೇಳಿ ಬಂದಿದ್ದು,ಅದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಈ ಕುರಿತು ನಿಖರವಾದ ಕಾರಣ ತಿಳಿದು ಬಂದಿಲ್ಲ.ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ್ ನಾಯ್ಕ ಕನಸಿಗದ್ದೆ ಮತ್ತು ಸಹಾಯಕರು  ಮೃತ ದೇಹವನ್ನು ಅಂಬುಲೆನ್ಸ್ ಮೂಲಕ ತಾಲೂಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದರು. ಸ್ಥಳೀಯ ಮುಖಂಡ ಹಾಗೂ ಪುರಸಭೆ ಸದಸ್ಯ ಪ್ರಕಾಶ ಗೌಡ ಹಾಗೂ  ಇತರರು ಸಹಕರಿಸಿದರು. ಪ್ರಕರಣ ದಾಖಲಿಸಿಕೊಂಡ ಅಂಕೋಲಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.           

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button