ರಸ್ತೆ ಮೇಲೆ ಹೋಗುತ್ತಿದ್ದ ವೇಳೆ ವ್ಯಕ್ತಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು: ತನಿಖೆಗೆ ವಿಶೇಷ ತಂಡ ರಚನೆ

ಶಿರಸಿ: ಇಲ್ಲಿನ ಝೂ ಸರ್ಕಲ್ ಬಳಿಯ ಆಲೇಸರ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಪ್ರಯತ್ನಿಸಿದ್ದರೆ. ಹಾನಗಲ್‌ನ ತರಕೇಶ್ವರ ಹನುಮಂತ ತಿಳವಳ್ಳಿ ಚೂರಿ ಇರಿತಕ್ಕೆ ಒಳಗಾದವ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ತಾರಕೇಶ್ವರ ಅವರ ಮೇಲೆ ಹಲ್ಲೆ ನಡೆದಿದೆ. ರಸ್ತೆಯಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಅವರನ್ನು ಕಂಡು ಇದೇ ರಸ್ತೆಯಲ್ಲಿ ಸಾಗುತ್ತಿದ್ದ ಅರಣ್ಯ ಇಲಾಖೆಯ ಎಸಿಎಫ್ ಮನೆಯ ಕೆಲಸಗಾರರೊಬ್ಬರು ಕೂಡಲೇ ಪೋಲಿಸರಿಗೆ ತಿಳಿಸಿದರು. ಕೂಡಲೆ ಕಾರ್ಯಪ್ರವೃತ್ತರಾದ ಸಿಪಿಐ ರಾಮಚಂದ್ರ ನಾಯಕ ಹಾಗೂ ಪಿಎಸ್‌ಐ ರಾಜಕುಮಾರ ಸ್ಥಳಕ್ಕೆ ಧಾವಿಸಿ ಮೊದಲಿಗೆ 108 ವಾಹನವನ್ನು ಸ್ಥಳಕ್ಕೆ ಕರೆಸಿ, ಆಸ್ಪತ್ರೆಗೆ ಸೇರಿಸಿದ್ದರು.

ಈ ಘಟನೆ ನಡೆದ ತಕ್ಷಣದಲ್ಲಿ ಸ್ಥಳೀಯರು ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿದುಬಂದಿದೆ.. ಸ್ಥಳಕ್ಕೆ ಎಡಿಶನಲ್ ಎಸ್.ಪಿ ಬದರಿನಾಥ, ಡಿಎಸ್ಪಿ ರವಿ ನಾಯ್ಕ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಶೋಧಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version