ಎರಡು ದ್ವಿಚಕ್ರ ವಾಹನಗಳ ಮಧ್ಯೆ ಭೀಕರ ಅಪಘಾತ: ಆಸ್ಪತ್ರೆಗೆ ತಾಯಿಯನ್ನು ಕರೆದುಕೊಂಡು ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು: ಇಬ್ಬರಿಗೆ ಗಂಭೀರ ಗಾಯ

ಆತ ತನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಬರುತ್ತಿದ್ದ. ಆದ್ರೆ, ಆಗಿದ್ದೆ ಬೇರೆ. ತನ್ನ ತಾಯಿಯಾದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ.

ಭಟ್ಕಳ : ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸಾಗರ ರಸ್ತೆಯ ಕಲ್ಲಾಬೇ ಕ್ರಾಸ್‌ನಲ್ಲಿ ನಡೆದಿದೆ.

ರಮೇಶ ಬಾದಿ ಎನ್ನುವ ವ್ಯಕ್ತಿ ತನ್ನ ತಾಯಿಯಾದ ಸರೋಜ ಬಾದಿಯನ್ನು ಕುಂಟವಾಣಿಯಿoದ ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಅಪಘಾತವಾಗಿದೆ.

ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಬೈಕ್ ಸವಾರ ಪ್ರದೀಪ್ ರಾಮಯ್ಯ ಗೊಂಡನಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.

ಇನ್ನಿಬ್ಬರಾದ ಎಕ್ಟಿವಾ ಬೈಕ್ ನಲ್ಲಿದ್ದ ತಾಯಿ ಸರುಜಾ ಕೃಷ್ಣ ಬಂಡೆ (55) ಮತ್ತು ಮಗ ರಮೇಶ ಮಾದೇವ ಬಂಡೆ (20) ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version