ಬಾಲಕಿ ಅಪಹರಿಸಿ ಬೆಂಗಳೂರಿಗೆ ಕರೆತಂದಿದ್ದ ದುಷ್ಕರ್ಮಿಗಳು : 24 ಗಂಟೆಯೊಳಗೆ ಆರೋಪಿ ಅಂದರ್

ಶಿರಸಿ: ದುಷ್ಕರ್ಮಿಯಿಂದ ಅಪಹರಣಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯನ್ನು 24 ಗಂಟೆಗಳ ಒಳಗೆ ಪತ್ತೆ ಹಚ್ಚಿ ಬನವಾಸಿ ಪೋಲಿಸರು ಪಾಲಕರಿಗೆ ಒಪ್ಪಿಸಿದ್ದಾರೆ. ಶಿರಸಿ ತಾಲೂಕಿನಕುಪ್ಪಗಡ್ಡೆ ಗ್ರಾಮದ ಮಹಮ್ಮದ್ ಗೌಸ್ ಇಸ್ಮಾಯಿಲ್ ಸಾಬ್ ಸವಣೂರು ಬಂಧಿತ ಆರೋಪಿ.

ಇದೇ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಯಾರೊ ದುಷ್ಕರ್ಮಿಗಳು ಪುಸಲಾಯಿಸಿ ಅಪಹರಿಸಿದ ಬಗ್ಗೆ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೋಲಿಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಕರೆತಂದು ಬಾಲಕಿಯನ್ನ ಪಾಲಕರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿವೈಎಸ್‌ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಬನವಾಸಿ ಠಾಣೆ ಪಿಎಸ್‌ಐ ಹಣಮಂತ ಬಿರದಾರ್, ಸಿಬ್ಬಂದಿಗಳಾದ ಸಂತೋಷ ತಳವಾರ, ಶಿವರಾಜ್ ಎಸ್. ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version