ಆತಂಕಕಾರಿ ಬೆಳವಣಿಗೆ: ಮತ್ತಷ್ಟು ಕಠಿಣ ನಿಯಮ ಜಾರಿಯಾಗುತ್ತಾ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಆತಂಕ ಹೆಚ್ಚುತ್ತಲೇ ಇದ್ದು, ಇದೀಗ ಪಾಸಿಟಿವಿಟಿ ದರದಲ್ಲಿ ದಿಢೀರ್ ಆಗಿ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಂದು 8.89%ಕ್ಕೆ ಏರಿಕೆಯಾಗಿದ್ದು, ಇದೇ ರೀತಿ ಮುಂದುವರಿದರೆ, ಮತ್ತಷ್ಟು ಕಠಿಣ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ.

ಆರ್.ಎ.ಟಿ ಪರೀಕ್ಷೆಯಲ್ಲಿ ಶೇಕಡಾ 11.63, ಆರ್.ಟಿ- ಪಿ. ಸಿ. ಆರ್ ಪರೀಕ್ಷೆಯಲ್ಲಿ ಶೇಕಡಾ 7.89 ಪಾಸಿಟಿವಿಟಿ ದರ ದಾಖಲಾಗಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ನಿನ್ನೆ ಸ್ವಲ್ಪ ಇಳಿಕೆ ಕಂಡು ಕೊಂಚ ನಿಟ್ಟುಸಿರು ಬಿಡುತ್ತಿರುವಾಗಲೇ , ಇದೀಗ ಪಾಸಿಟಿವಿಟಿದ ದರ ಶೇಕಡಾ 10ರ ಸಮೀಪಕ್ಕೆ ಸಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದೆರಡು ದಿನದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗದೇ ಇದ್ದಲ್ಲಿ, ಬಹುಶ: ಮತ್ತಷ್ಟು ಕಠಿಣ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version