Follow Us On

WhatsApp Group
Important
Trending

ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ: ವಾರಾಂತ್ಯದ ಕರ್ಪ್ಯೂ ವಾಪಸ್

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂವನ್ನು ಸರ್ಕಾರ ವಾಪಸ್ ಪಡೆದಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ‌ ನಿರ್ಣಯ ಕೈಗೊಳ್ಳಲಾಗಿದೆ.

ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್, ಬಾರ್ ಮಾಲೀಕರು, ಉದ್ಯಮಿಗಳ ಸಂಘ ಮಾಡಿದ ಮನವಿಗೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಅಧಿಕೃತ ಘೋಷಣೆ ಮಾಡಿದೆ. ನೈಟ್ ಕರ್ಫ್ಯೂ ನಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಬ್ಯೂರೊ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button