Follow Us On

WhatsApp Group
Focus News
Trending

ಪುರಸಭೆ ವ್ಯಾಪ್ತಿಯ ಮೈದಾನದ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿ ವಶಕ್ಕೆ

ಅಂಕೋಲಾ: ಪುರಸಭೆ ವ್ಯಾಪ್ತಿಯ ಮೈದಾನದ ಬಳಿ, ಗೂಡಂಗಡಿ ಇಟ್ಟು  ಮಟ್ಕಾ ಚೀಟಿ (ಓಸಿ ) ಬರೆಯುತ್ತಿದ್ದ ವ್ಯಕ್ತಿಯೋರ್ವನನ್ನು ಪೋಲೀಸರು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ನಡೆದಿದೆ.   ತಾಲೂಕಿನ ಕೇಣಿ ನಿವಾಸಿ  ಶ್ಯಾಮ್ ಗೋಪಿನಾಥ್ ಬಂಟ್  (35) ಬಂಧಿತ ಆರೋಪಿಯಾಗಿದ್ದು,   ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು  ಆರೋಪಿಯಿಂದ 2035 ರು ನಗದು ಮತ್ತು ಮಟ್ಕಾಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡು  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಗೂಡಂಗಡಿ ಹಾಕಿಕೊಂಡಿದ್ದ ಶ್ಯಾಮ, ಕೇಣಿ ಮೈದಾನದ ಬಳಿ ಸಾರ್ವಜನಿಕರಿಂದ ಓಸಿ ತೆಗೆದುಕೊಳ್ಳುತ್ತಿದ್ದ  ಸಂದರ್ಭದಲ್ಲಿ ಅಂಕೋಲಾ ಸಿ ಪಿಐ ಸಂತೋಷ ಶೆಟ್ಟಿ ಮಾರ್ಗದರ್ಶನದಲ್ಲಿ ಪಿ ಎಸ್ ಐ ಪ್ರವೀಣ್ ಕುಮಾರ್, ಪ್ರೇಮನ ಗೌಡ ಪಾಟೀಲ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದರು. ಎಸ್ಪಿಯಾಗಿ ಡಾ. ಸುಮನ ಪನ್ನೇಕರ ಅಧಿಕಾರ ವಹಿಸಿಕೊಂಡ ನಂತರ, ಜಿಲ್ಲೆಯಲ್ಲಿ ಹಲವು ಅಕ್ರಮ ಚಟುವಟಿಕೆಗಳು ಬಹುತೇಕ ನಿಂತು ಹೋಗಿದ್ದು, ಇಲಾಖೆ ಇನ್ನಷ್ಟು ಬಿಗು ಕ್ರಮ ಕೈಗೊಂಡು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ  ಹಾಕಬೇಕೆನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.                 

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button