Important
Trending

ಹೆಂಡತಿಯನ್ನು ಮನೆಯಿಂದ ಹೊರಗೆ ಕಳುಹಿಸಿ ಸಾವಿಗೆ ಶರಣಾದ ವ್ಯಕ್ತಿ

ಅಂಕೋಲಾ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಡ್ಲೂರ ಗ್ರಾಮದ ಜನತಾ ಕಾಲೋನಿಯಲ್ಲಿ ಸಂಭವಿಸಿದೆ.

ರೈತಾಪಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ರಾಮಚಂದ್ರ ನಾಯಕ (38) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಈತನು ಬುಧವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿ ಬಂದವನು ಮಧ್ಯಾಹ್ನ ಮತ್ತೆ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದ ಎನ್ನಲಾಗಿದ್ದು ರಾತ್ರಿ 8.30 ರ ಸುಮಾರಿಗೆ ಈತ ತನ್ನ ಹೆಂಡತಿಗೆ ಮನೆಯ ಗೇಟ್ ಹಾಕಿ ಬರುವಂತೆ ಹೊರಗೆ ಕಳಿಸಿ, ಅವಳು ತಿರುಗಿ ಬರುವಷ್ಟರಲ್ಲಿ ತಾನು ಮನೆಯ ಮಾಡಿನ ಜಂತಿಗೆ ನೈಲನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳೀಯರ ನೆರವಿನಲ್ಲಿ ಆತನನ್ನು ನೇಣಿನಿಂದ ಇಳಿಸಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರಾದರೂ, ಆ ವೇಳೆಗೆ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ. ಸರಾಯಿ ಕುಡಿತದ ಚಟ ಇದ್ದ ಆತ ಅದಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡು ನೇಣಿಗೆ ಶರಣಾಗಿರಬಹುದು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಈ ಕುರಿತು ಮೃತನ ಸಹೋದರ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button