ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ , ಲಾರಿಯ ನಡುವೆ ಡಿಕ್ಕಿ: ಅಪಾಯದಿಂದ ಪಾರಾದ ರೋಗಿಗಳು, ಚಾಲಕ

ಭಟ್ಕಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಜಾಲಿ ಕ್ರಾಸ್ ಸಮೀಪ ಆ್ಯಂಬುಲೆನ್ಸ್ ಹಾಗೂ ಕಂಟೈನರ್ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ್ದು ಆ್ಯಂಬುಲೆನ್ಸ್ ವಾಹನದ ಎದುರು ಭಾಗ ಸಂಪೂರ್ಣ ಜಖಂಗೊoಡಿದೆ . ಅದೃಷ್ಟವಶಾತ್ ಆ್ಯಂಬುಲೆನ್ಸ್ ಚಾಲಕ, ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಅವರ ಸಂಬoಧಿಗಳು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಹೊನ್ನಾವರದಿಂದ ಹೃದಯ ಸಂಬoಧಿ ರೋಗಿಯೋರ್ವರನ್ನು ಕರೆದುಕೊಂಡು ಮಣಿಪಾಲದ ಕಡೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ಜಾಲಿ ಕ್ರಾಸ್ ಹತ್ತಿರ ತಲುಪುತ್ತಿದ್ದಂತೆಯೇ ಎದುರುಗಡೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಕಂಟೈನರ್ ಲಾರಿಯು ಜಾಲಿ ಕ್ರಾಸ್ ಹತ್ತಿರ ಬರುತ್ತಿದ್ದಂತೆಯೇ ಲಾರಿಯ ಎದುರುಗಡೆಯಲ್ಲಿ ಕಾರೊಂದು ಎದುರುಗಡೆಯಲ್ಲಿ ಬಂದು ತಿರುವು ಪಡೆದುಕೊಂಡು ಹೋಗಿದ್ದರಿಂದ ಲಾರಿ ಚಾಲಕ ಬ್ರೇಕ್ ಹಾಕಿದ್ದು ಹಿಂಬದಿಯಿoದ ಬರುತ್ತಿದ್ದ ಅಂಬುಲೆನ್ಸ್ ವಾಹನ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ನ ಎದುರು ಭಾಗ ಜಖಂ ಗೊಂಡಿದೆ. ಅಪಘಾತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಆದ ಕಾರಣ ವಾಹನ ಸವಾರರಿಗೆ ಸಮಸ್ಯೆಯಾಗಿದ್ದು, ನಂತರ ಸ್ಥಳಕ್ಕೆ ಬಂದ ಪೊಲೀಸ ಟ್ರಾಫಿಕ್ ಸಮಸ್ಯೆ ಬಗೆ ಹರಿಸಿದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version