Follow Us On

WhatsApp Group
Important
Trending

ಉತ್ತರಕನ್ನಡದ ಉಸ್ತುವಾರಿ ಸಚಿವರ ಬದಲಾವಣೆ: ಉಸ್ತುವಾರಿ ಸಚಿವರಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಕಾರವಾರ: ರಾಜ್ಯದ 30 ಜಿಲ್ಲೆಗಳಿಗೆ ನೂತನ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದು, ಅಚ್ಚರಿಯೆಂಬಂತೆ ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕೋಟಾ ಶ್ರೀನಿವಾಸ್ ಪೂಜಾರಿಯನ್ನು ನೇಮಿಸಲಾಗಿದೆ.

ಈ ವರೆಗೂ ಉತ್ತರಕನ್ನಡದ ಉಸ್ತುವಾರಿಯಾಗಿದ್ದ ಶಿವರಾಮ್ ಹೆಬ್ಬಾರ್ ಅವರನ್ನು ಹಾವೇರಿಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಿರುವುದು ಕುತೂಹಲ ಮತ್ತು ಹಲವು ಅನುಮಾನಕ್ಕೆ ಕಾರಣವಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button