Important
Trending

ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವು

ಭಟ್ಕಳ: ತಾಲೂಕಿನ ತೆರ್ನಮಕ್ಕಿ ಸಭಾತಿ ಕ್ರಾಸ್ ನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಜೋಸೆಫ್ ಪ್ರಾನ್ಸಿಸ್ ಲೂಯಿಸ್ ಎಂದು ತಿಳಿದು ಬಂದಿದೆ. ಈತನು ಲಾರೆನ್ಸ್ ಕ್ಲೇಮೆಂಟ್ ಗೋನ್ಸಾಲಿಸ್ ಎಂಬಾತನ ಬೈಕ್ ಹಿಂಬದಿಯಲ್ಲಿ ಕೂತು ತೆರ್ನಮಕ್ಕಿ ಕಡೆಯಿಂದ ಸಭಾತಿ ಕ್ರಾಸನಲ್ಲಿ ಬೈಕ್ ನಲ್ಲಿ ಚರ್ಚ್ ಪೆಸ್ತಾ ಕಾರ್ಯಕ್ರಮಕ್ಕೆ ಹೋಗುತ್ತಿರುವ ವೇಳೆ ಈ ದುರ್ಘಟನೆ ನಡೆದಿದೆ.

ಭಟ್ಕಳ ಕಡೆಯಿಂದ ಹೊನ್ನಾವರದ ಕಡೆಗೆ ಅತಿವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ಬಂದು ಮುಂದೆ ಹೋಗುತ್ತಿದ್ದ ಬೈಕ್ ಹಿಂಬದಿಗೆ ಢಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button