Important
Trending

ಕಾರಿನಲ್ಲಿ ಅಕ್ರಮವಾಗಿ ಮರದ ನಾಟಾ ಸಾಗಾಟ: ಇಬ್ಬರ ಬಂಧನ: ತಪ್ಪಿಸಿಕೊಂಡ ಇಬ್ಬರಿಗಾಗಿ ಶೋಧ

ಕುಮಟಾ: ಅಕ್ರಮವಾಗಿ ಮರದ ನಾಟಾವನ್ನ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚಂದಾವರದ ಮಾಸ್ತಿಮನೆ ಬಳಿ ಭರಣಿ ಮರದ ನಾಟಾಗಳನ್ನ ಓಮಿನಿಯಲ್ಲಿ ಸಾಗಿಸುತ್ತಿರುವಾಗ ಅರಣ್ಯ ಇಲಾಖೆ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಾಹನ ಸಮೇತ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.

ಮಾರು ಗೌಡ ಹಾಗೂ ಶಶಿಧರ ನಾಯ್ಕ ಎನ್ನುವವರನ್ನ ಬಂಧಿಸಿದ್ದು, ಮಂಜುನಾಥ ನಾಯ್ಕ ಹಾಗೂ ರಾಮ ನಾಯ್ಕ ಎನ್ನುವವರು ಪರಾರಿಯಾಗಿದ್ದಾರೆ. ಬಂಧಿತರಿoದ ವಶಪಡಿಸಿಕೊಂಡ ಮರದ ಮೌಲ್ಯ ಸುಮಾರು ಹದಿನೈದು ಸಾವಿರಕ್ಕೂ ಅಧಿಕವಾಗಿದ್ದು, ಚಂದಾವರ ಸಮೀಪದ ಕಾಡಿನಲ್ಲಿ ಭರಣಿ ಮರವನ್ನ ಕತ್ತರಿಸಿ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಹೊನ್ನಾವರ ಡಿಎಫ್‌ಓ ಕೆ.ಗಣಪತಿ, ಆರ್‌ಎಫ್‌ಓ ಪ್ರವೀಣ ಆರ್.ನಾಯಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ತಪ್ಪಿಸಿಕೊಂಡ ಇಬ್ಬರು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button