Follow Us On

WhatsApp Group
Important
Trending

ಬಸ್ ನ ಟಾಯರ್ ಗೆ ಸಿಲುಕಿಕೊಂಡ ಬೈಕ್: ಸ್ಕೂಟಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡ ಸವಾರರು

ಕಾರವಾರ: ಸ್ಕೂಟರ್‌ವೊಂದು ಬಸ್ಸಿನಡಿ ಸಿಕ್ಕಿಕೊಂಡು ಸವಾರರು ಅದೃಷ್ಟವಶಾತ್ ಪಾರಾದ ಘಟನೆ ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ. ಸ್ಕೂಟರ್‌ನಲ್ಲಿದ್ದ ಸವಾರರು ಮಾರುಕಟ್ಟೆಯಲ್ಲಿ ಹೂವು ಹಣ್ಣು ಖರೀದಿಸಿ, ಬಳಿಕ ಬಸ್ ನಿಲ್ದಾಣದ ಮಾರ್ಗವಾಗಿ ಮನೆಗೆ ಹೋಗುತ್ತಿ ದ್ದರು. ಈ ಸಂದರ್ಭದಲ್ಲಿ ಭಟ್ಕಳದಿಂದ ಮಡಗಾಂವ್‌ಗೆ ಹೋಗುವ ಬಸ್ ನಿಲ್ದಾಣ ಪ್ರವೇಶಿಸುತ್ತಿತ್ತು.

ಈ ಸಂದರ್ಭದಲ್ಲಿ ದಿಢೀರ್ ಬಸ್ ನ ಎದುರು ಬಂದ ಸ್ಕೂಟರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಸವಾರರು ದೂರು ಜಿಗಿದಿದ್ದಾರೆ. ಸ್ಕೂಟರ್ ಬಸ್ಸಿನಡಿ ಸಿಕ್ಕಿಹಾಕಿಕೊಂಡಿತ್ತು. ಸಂಭವಿಸಲಿದ್ದ ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ. ಘಟನೆಯಲ್ಲಿ ಸ್ಕೂಟಿ, ಬಸ್ ಟಾಯರ್ ನ ಸಮೀಪ ಸಿಲುಕಿಕೊಂಡಿದ್ದು, ಸಂಪೂರ್ಣ ಜಖಂಗೊoಡಿದೆ. ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button