ವಿದ್ಯಾರ್ಥಿಗಳ ಬೈಕಿಗೆ ಪಿಕಪ್ ವಾಹನ ಡಿಕ್ಕಿ: ಬೈಕ್ ಸವಾರ ಗಂಭೀರ: ಹಿಂಬದಿ ಸವಾರನಿಗೆ ಗಾಯ

ಅಂಕೋಲಾ: ಮೋಟಾರು ಬೈಕಿಗೆ 207  ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡರೆ, ಹಿಂಬದಿ ಸವಾರನೂ ಗಾಯಗೊಂಡ ಘಟನೆ ತಾಲೂಕಿನ ಬಾಳೆಗುಳಿ ವರದರಾಜ ಹೊಟೇಲ್  ಹತ್ತಿರ ಇತ್ತೀಚೆಗೆ ಸಂಭವಿಸಿದೆ. ಬೈಕ್ ಸವಾರ ಗೋಕರ್ಣ ಸಮೀಪದ ಸಾಣೆಕಟ್ಟಾ ನಿವಾಸಿ ವಿನಯ ಘಟ್ಟಾ ಹೊಸ್ಕಟ್ಟಾ (21) ಇವರ ಎಡಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದೆ.

ಹಿಂಬದಿ ಸವಾರ ಹೊನ್ನಾವರದ ಕಡ್ಲೆ  ಹೆಬ್ಬಾರನಕೇರಿ ನಿವಾಸಿ ವಿಶ್ವ ಮಹಾಬಲೇಶ್ವರ ಮಡಿವಾಳ (21) ಈತನಿಗೂ ಚಿಕ್ಕಪುಟ್ಟ ಗಾಯಗಳಾಗಿವೆ.ಕಾಲೇಜು ವಿದ್ಯಾರ್ಥಿಗಳಾದ ಇವರು ಜನೆವರಿ 31 ರಂದು ಮದ್ಯಾಹ್ನ ಕಾರವಾರ  ಕಡೆಯಿಂದ ಅಂಕೋಲಾ ಕಡೆ  ಬರುತ್ತಿದ್ದ ಸಂದರ್ಭದಲ್ಲಿ ಬಾಳೆಗುಳಿ ಹತ್ತಿರ ಕಚ್ಚಾ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಅಜಾಗರೂಕತೆಯಿಂದ ಪಿಕಪ್ ವಾಹನ ಸಂಖ್ಯೆ ಕೆ.ಎ30/9390 ಚಲಾಯಿಸಿಕೊಂಡು ಬಂದು ಬೈಕಿಗೆ (KA 47- H 5084) ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಐಆರ್ ಬಿ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಓಡಾಟದಲ್ಲಿದ್ದ ಕಾರಣ ದೂರು ನೀಡಲು ವಿಳಂಬವಾಗಿದೆ ಎಂದು ಬೈಕ್ ಸವಾರ (ಗಾಯಾಳುವಿನ) ತಂದೆ ಘಟ್ಟ ಹುಲಿಯಪ್ಪ ಹೊಸ್ಕಟ್ಟಾ ದೂರಿನಲ್ಲಿ ತಿಳಿಸಿದ್ದಾನೆ.ಈ ಕುರಿತಂತೆ ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.                       

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version