ಮನೆಗೆ ಮರಳುತ್ತಿದ್ದಾಗ ಅಪಘಾತದಲ್ಲಿ ಸಾವು: ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಯುವಕ ಆದಿತ್ಯ

ಸಿದ್ದಾಪುರ: ಬೈಕ್ ಚಲಾಯಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಬಿದ್ದು ಮೃತಪಟ್ಟ ದುರ್ಘಟನೆ ತಾಲೂಕಿನ ಕೋಲಸಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ನಡೆದಿದೆ. ತಾಲೂಕಿನ ಉಪ್ಪಡಿಕೆಯ ಆದಿತ್ಯ ಹೆಗಡೆ ಎಂಬಾತನೇ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಈತ ಹಾಲು ಡೈರಿಯ ಮುಖ್ಯಕಾರ್ಯನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ. ಡೈರಿ ಕೆಲಸ ಮುಗಿಸಿ, ಜಿಮ್ ವರ್ಕೌಟ್ ಮಾಡಿ ಮನೆಗೆ ಬರುವ ವೇಳೆಗೆ ಈ ಅವಘಡ ಸಂಭವಿಸಿದೆ.

ರಸ್ತೆ ದುರಸ್ತಿ ಕೆಲಸ ನಡೆಯುತ್ತಿದ್ದು, ಬದಲಿ ರಸ್ತೆಯ ನಾಮಫಲಕ ಹಾಕದೇ ಇರುವುದು ಈ ದುರಂತಕ್ಕೆ ಕಾರಣ ಎಂದು ಕೆಲ ಸಾರ್ವಜನಿಕರು ಆರೋಪಿಸಿದ್ದಾರೆ. ಮರಣದ ನಂತರ ನೇತ್ರದಾನದ ನೋಂದಣಿ ಮಾಡಿದ್ದ ಆದಿತ್ಯನ ಇಚ್ಛೆಯಂತೆ ಮನೆಯವರು ನೇತ್ರದಾನದ ಪ್ರಕ್ರಿಯೆ ಪೂರ್ಣಗೊಳಿಸಿದರು. ಅಕಾಲ ಸಾವಿನಲ್ಲಿ ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಆದಿತ್ಯ ಹೆಗಡೆಯ ಕುರಿತು ಪ್ರಶಂಸೆ ವ್ಯಕ್ತವಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version