Important
Trending

ಓವರ್ ಟೇಕ್ ಮಾಡುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ: ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಯಲ್ಲಾಪುರ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಹಿಂಬದಿ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ತಾಲೂಕಿನ ನಂದಿಗಟ್ಟ ಗ್ರಾಮದ ಶರೀಪ ಫಕ್ಕೀರಪ್ಪ ತಳವಾರ(27) ಎಂಬವನು ಸ್ಥಳದಲ್ಲಿಯೇ ಮೃತಪಟ್ಟರೆ, ಬೈಕ್ ಚಲಾಯಿಸುತ್ತಿದ್ದ ವಿಶ್ವನಾಥ ಸವಣೂರು (26) ತೀವ್ರ ಗಾಯಗೊಡಿದ್ದಾನೆ. ಜಲ್ಲಿಕಲ್ಲು ಹೇರಿಕೊಂಡು ಮುಂಡಗೋಡಕ್ಕೆ ಟಿಪ್ಪರ್ ಲಾರಿ ಸಾಗುತ್ತಿತ್ತು.

ಈ ವೇಳೆ ಬೈಕ್ ಸವಾರರು ಸಹ ಮುಂಡಗೋಡಕ್ಕೆ ಹೊರಟಿದ್ದರು ಲಾರಿಯನ್ನು ಒವರ್ ಟೇಕ್ ಮಾಡುವಾಗ ನಿಯಂತ್ರಣ ತಪ್ಪಿ ಬೈಕ್ ಲಾರಿಯ ಡೀಸೆಲ್ ಟ್ಯಾಂಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಹಿಂಬದಿ ಸವಾರ ಶರೀಫ್ ಲಾರಿಯ ಚಕ್ರಕ್ಕೆ ಸಿಲುಕಿದ್ದು, ಎರಡು ಕೈಗಳು ಕಟ್ಟಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೈಕ್ ಚಲಾಯಿಸುತ್ತಿದ್ದ ವಿಶ್ವನಾಥ ತೀವ್ರ ಗಾಯಗೊಡಿದ್ದಾನೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button