ಎಕ್ಸೆಲ್ ತುಂಡಾಗಿ ರಸ್ತೆ ಮಧ್ಯೆಯೇ ಲಾರಿ ಪಲ್ಟಿ: ಅದೃಷ್ಟವಶಾತ್ ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕಾರವಾರ: ತೆಂಗಿನಕಾಯಿ ಚೀಲ ತುಂಬಿದ ಮಿನಿ ಲಾರಿಯೊಂದು ಎಕ್ಸೆಲ್ ತುಂಡಾಗಿ ರಸ್ತೆ ಮಧ್ಯದಲ್ಲಿ ಪಲ್ಟಿಯಾದ ಘಟನೆ ತಾಲ್ಲೂಕಿನ ಸದಾಶಿವಗಡ ಸಮೀಪ ಹೆದ್ದಾರಿ- 66ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮಿನಿ ಲಾರಿಯಲ್ಲಿ ಚಾಲಕ ಮತ್ತು ಕ್ಲಿನರ್ ಇದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ, ಉಡುಪಿ ಜಿಲ್ಲೆಯ ಸಂತೆಕಟ್ಟೆಯಿoದ ತೆಂಗಿನಕಾಯಿ ತುಂಬಿಕೊoಡು ಗೋವಾದ ಪಣಜಿಗೆ ಹೊರಟಿತ್ತು.

ಸದಾಶಿವಗಡ ಟೋಲ್ ನಾಕಾ ಬಳಿ ಬಂದಾಗ ಲಾರಿಯ ಎಕ್ಸೆಲ್ ತುಂಡಾಗಿ ಲಾರಿ ಪಲ್ಟಿಯಾಗಿದೆ. ಲಾರಿ ಹಿಂದಿನ ಎರಡೂ ಚಕ್ರ ಸುಮಾರು ಐದಾರು ಅಡಿ ದೂರದಲ್ಲಿ ಬಿದ್ದಿತ್ತು. ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿದರು.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version