ತಂಗಿಯ ಮದುವೆ ನಿಶ್ಚಯ ಮಾಡಿ, ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ಅಣ್ಣನೇ ಆತ್ಮಹತ್ಯೆಗೆ ಶರಣು

ಭಟ್ಕಳ : ಮನೆಯ ಜವಾಬ್ದಾರಿಗಳನ್ನು ನಿರ್ವಹಿಸಿ, ತಂಗಿಯ ಮದುವೆ ನಿಶ್ಚಯವಾಗಿದ್ದ ಸಂದರ್ಭದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದ ಅಣ್ಣನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆ ಮಗನನ್ನು ಕಳೆದುಕೊಂಡ ಕುಟುಂಬ ದಿಕ್ಕು ತೋಚದಂತಾದ ಪರಿಸ್ಥಿತಿ ತಾಲೂಕಿನ ಕೊಳ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ತಾಲೂಕಿನ ಕೋಣಾರ ಗ್ರಾಮ ಪಂಚಾಯತಿಯ ಬೆಸೆ ನಿವಾಸಿ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ವೃತ್ತಿಯಲ್ಲಿ ಕೃಷಿಕನಾಗಿದ್ದು ಮನೆ ನಿರ್ವಹಣೆಯನ್ನು ಈತನೇ ಮಾಡುತ್ತಿದ್ದ ಎನ್ನಲಾಗಿದೆ. ಇನ್ನೆರಡು ದಿನದಲ್ಲಿ ತಂಗಿಯ ಮದುವೆ ನಿಶ್ಚಯವಾಗಿತ್ತು ಈ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನೆಯ ಬಗ್ಗೆ ಪೂರ್ಣ ಮಾಹಿತಿ ಪೊಲೀಸ್ ತನಿಖೆ ನಂತರದಲ್ಲಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version