Follow Us On

WhatsApp Group
Important
Trending

ವಾಕಿಂಗ್ ಗೆ ಹೊರಟಿದ್ದ ವ್ಯಕ್ತಿಯ ಮೇಲೆ ಹಂದಿ ದಾಳಿ: ಜಿಗಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರಾದರೂ ಒಂದು ಕಾಲನ್ನು ಕಚ್ಚಿದ ಹಂದಿ

ವಾಕಿಂಗ್ ಹೊರಟಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡು ಹಂದಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಬಿಣಗಾ ಬಳಿ ನಡೆದಿದೆ. ಕಾಡು ಹಂದಿಯನ್ನು ಕಂಡ ವ್ಯಕ್ತಿ ಜಿಗಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರಾದರೂ, ಅವರ ಒಂದು ಕಾಲನ್ನು ಕಚ್ಚಿದೆ.

ಹೌದು, ಬಿಣಗಾ ನಿವಾಸಿ ರವಿಕಾಂತ ಎಂ.ನಾಯ್ಕ(52) ಎನ್ನುವವರು ಬೆಳಿಗ್ಗೆ ವಾಕಿಂಗ್ ಹೋಗುವಾಗ ಬಿಣಗಾ ಗುನಗಿವಾಡ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹತ್ತಿರ ಬೆಳಗ್ಗೆ ಕಾಡು ಹಂದಿ ಧಾವಿಸಿ ಬಂದು ದಾಳಿ ಮಾಡಿದೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಇವರ ರಕ್ಷಣೆಗೆ ಧಾವಿಸಿ ಸಿವಿಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button