ಅತಿವೇಗವಾಗಿ ಬಂದು ಬೈಕ್ ಗೆ ಡಿಕ್ಕಿಹೊಡೆದ ಲಾರಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊನ್ನಾವರ: ತಾಲೂಕಿನ ಹಳದೀಪುರ ಮೀನು ಮಾರುಕಟ್ಟೆ ಕ್ರಾಸ್ ಬಳಿ ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೆಬ್ಬಾರ್ನಕೆರೆ ನಿವಾಸಿ ನಿವೃತ್ತ ಕಾನ್ ಸ್ಟೇಬಲ್ ರಾಘವೇಂದ್ರ ಸುಬ್ಬಾ ರಾವ್ (42) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಹೋಗಲು ಬಂದ ಲಾರಿ ಚಾಲಕನಾದ ಅಸ್ಲಾಂ ಖಾನ್ ಅಯೂಬ್ (36 ) ಪಾವಸರ, ಕೊಟ್ ಪಲವಲ್ ಜಿಲ್ಲಾ ಹರಿಯಾಣ ರಾಜ್ಯ ಈತನು ಲಾರಿಯನ್ನು ಅತಿವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಕೊಂಡು ಬಂದು ತನ್ನ ಮುಂದೆ ಹೋಗುತ್ತಿದ್ದ ಮೋಟಾರ ಸೈಕಲ್ ಡಿಕ್ಕಿ ಹೊಡೆದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version