ಅತಿ ಕಿರಿಯ ವಯಸ್ಸಿನಲ್ಲೇ ನೌಕಾಸೇನೆಯ ಪ್ರಮುಖ ಹುದ್ದೆಗೆ ನೇಮಕ: ಯುವಕನ ಸಾಧನೆಗೆ ಅಭಿನಂದನೆ ಸಲ್ಲಿಸಿ

ಶಿರಸಿ: ಹದಿನೆಂಟನೇ ವಯಸ್ಸಿನಲ್ಲೇ ನೌಕಾಸೇನೆಯ ಸೀನಿಯರ್ ಸೆಕೆಂಡರಿ ರಿಕ್ರೂಟ್ ಹುದ್ದೆಗೆ ನೇಮಕಗೊಳ್ಳುವ ಯುವಕನೊಬ್ಬ ಸಾಧನೆ ಮಾಡಿದ್ದಾನೆ. ಹೌದು, ದೇಶದ ಸೈನ್ಯ ವ್ಯವಸ್ಥೆಯಲ್ಲಿ ಮಂಚೂಣಿಯಲ್ಲಿರುವ ನೌಕಾಸೇನೆಗೆ ಶಿರಸಿಯ ಗಾಂಧಿನಗರದ ನಿವಾಸಿ ಮುಂಡಗೋಡ ತಾಲೂಕಿನ ಧರ್ಮಾ ಕಾಲನಿಯ ಸ. ಹಿ. ಪ್ರಾ. ಶಾಲೆಯ ಶಿಕ್ಷಕ ಶ್ರೀ ಕಾಶಿನಾಥ ನಾಯ್ಕ ಮತ್ತು ವಿಲಾಸಿನಿ ನಾಯ್ಕ ದಂಪತಿಗಳ ಮಗನಾದ ನಮನ ನಾಯ್ಕ ಆಯ್ಕೆಯಾಗಿದ್ದಾರೆ. ಅತಿ ಕಿರಿಯ ವಯಸ್ಸಿನಲ್ಲಿ ನೌಕಾಸೇನೆಯ ಸೀನಿಯರ್ ಸೆಕೆಂಡರಿ ರಿಕ್ರೂಟ್ ಹುದ್ದೆಗೆ ನೇಮಕಗೊಳ್ಳುವ ಮೂಲಕ ಈತ ಊರಿಗೆ, ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version