ಕಾರಿನಲ್ಲಿ 200 ಕೆ.ಜಿ ಗೋಮಾಂಸ ಸಾಗಾಟ: ತಪಾಸಣೆ ವೇಳೆ ವಾಹನ ಬಿಟ್ಟು ಪರಾರಿಯಾದ ಆರೋಪಿಗಳು

ಹೊನ್ನಾವರ : ತಾಲೂಕಿನಲ್ಲಿ ಟಾಟಸುಮೊ ವಾಹನದಲ್ಲಿ 200 ಕೆ.ಜಿ ಗೊಮಾಂಸವನ್ನು ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದರು. ಈ ವೇಳೆ ತಾಲೂಕಿನ ಬೈಲಗದ್ದೆ ಸಮೀಪ ಅತಿವೇಗ ಅಜಾಗರೂಕತೆಯಿಂದ ದ್ವಿಚಕ್ರ ವಾಹನಕ್ಕೆ ಅಪಘಾತಪಡಿಸಿ, ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಚಲಾಯಿಸಿಕೊಂಡ ಬಂದ ಹಿನ್ನಲೆ ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು.

ಇದನ್ನು ಗಮನಿಸಿದ ಟಾಟಾಸುಮೊದಲ್ಲಿ ಇರುವ ಆರೋಪಿಗಳು ವಾಹನವನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. 200 ಕೆ.ಜಿ ಮೌಂಸದ ಮೌಲ್ಯ 35 ಸಾವಿರ ಎಂದು ಅಂದಾಜಿಸಲಾಗಿದೆ. ವಾಹನವನ್ನು ವಶಕ್ಕೆ ಪಡೆದಿರುವ ಹೊನ್ನಾವರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version